‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಮನಸ್ಸುಗಳನ್ನು ಸಜ್ಜುಗೊಳಿಸುತ್ತಿರುವ ಶಿಕ್ಷಕರ ಸೇವೆಗಾಗಿ ರಾಷ್ಟ್ರ ಎಂದಿಗೂ ಕೃತಜ್ಞರಾಗಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದ ಸಂದೇಶದಲ್ಲಿ ತಿಳಿಸಿದ್ದಾರೆ.
‘ನಮ್ಮ ಅರಿವಿನ ಮಟ್ಟವನ್ನು, ದೇಶದ ಇತಿಹಾಸದ ಜ್ಞಾನವನ್ನು ಶಿಕ್ಷಕರು ಹೆಚ್ಚಿಸುತ್ತಾರೆ. ಇತ್ತೀಚಿನ ಮನ್ ಕೀ ಬಾತ್ ಭಾಷಣದಲ್ಲಿಯೂ ಇತಿಹಾಸದ ಅರಿವು ಮೂಡಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದ್ದೆ. ನಮ್ಮ ಶಿಕ್ಷಕರು ನಮ್ಮ ಹೀರೋಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಸೇವೆಯನ್ನು ಸ್ಮರಿಸಿದರು.
ನವದೆಹಲಿ: ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಮನಸ್ಸುಗಳನ್ನು ಸಜ್ಜುಗೊಳಿಸುತ್ತಿರುವ ಶಿಕ್ಷಕರ ಸೇವೆಗಾಗಿ ರಾಷ್ಟ್ರ ಎಂದಿಗೂ ಕೃತಜ್ಞರಾಗಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದ ಸಂದೇಶದಲ್ಲಿ ತಿಳಿಸಿದ್ದಾರೆ.
‘ನಮ್ಮ ಅರಿವಿನ ಮಟ್ಟವನ್ನು, ದೇಶದ ಇತಿಹಾಸದ ಜ್ಞಾನವನ್ನು ಶಿಕ್ಷಕರು ಹೆಚ್ಚಿಸುತ್ತಾರೆ. ಇತ್ತೀಚಿನ ಮನ್ ಕೀ ಬಾತ್ ಭಾಷಣದಲ್ಲಿಯೂ ಇತಿಹಾಸದ ಅರಿವು ಮೂಡಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದ್ದೆ. ನಮ್ಮ ಶಿಕ್ಷಕರು ನಮ್ಮ ಹೀರೋಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಸೇವೆಯನ್ನು ಸ್ಮರಿಸಿದರು.