ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಹಂಪಿ ‘ಎದುರು ಬಸವಣ್ಣ’ ಮಂಟಪದ ಕಲ್ಲುಗಳು ಭಾನುವಾರ ಕುಸಿದು ಬಿದ್ದಿವೆ.
‘ಇತ್ತೀಚಿನ ಕೆಲವು ದಿನಗಳಿಂದ ಮೇಲಿಂದ ಮೇಲೆ ಮಳೆ ಬರುತ್ತಿದ್ದು, ಮಳೆ ನೀರಿಗೆ ಗೋಡೆ ನೆನೆದು ಮಂಟಪದ ಕಲ್ಲುಗಳು ಬಿದ್ದಿರುವ ಸಾಧ್ಯತೆ ಇದೆ. ಈ ಹಿಂದೆಯೂ ಈ ಮಂಟಪದ ಕಲ್ಲುಗಳು ಬಿದ್ದಿವೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು ತಿಳಿಸಿದ್ದಾರೆ.
ಸತತ ಮಳೆ: ಬಳ್ಳಾರಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಆರಂಭಗೊಂಡ ಜಿಟಿಜಿಟಿ ಮಳೆ ಭಾನುವಾರ ದಿನವಿಡೀ ಸುರಿದಿದೆ. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.