ಕಾಂಗ್ರೆಸ್ ವಕ್ತಾರ ಎಂ.ಲಕ್ಷಣ್ ವಿರುದ್ಧ ಕ್ರಿಮಿನಲ್ ಕೇಸ್, ಸಲೀಂ ಅಹಮದ್ ಆಕ್ರೋಶ

0

ಮುಖ್ಯಮಂತ್ರಿ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ವಕ್ತಾರ ಎಂ.ಲಕ್ಷಣ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಸರ್ಕಾರದಲ್ಲಿ ಮಾಡುತ್ತಿರುವ ಹಸ್ತಕ್ಷೇಪದ ಕುರಿತು ಅವರ ಪಕ್ಷದ ಶಾಸಕರೇ ದೆಹಲಿಯ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದಾರೆ.

ವಿಜಯೇಂದ್ರ ಅವರು ಸೂರ್ಪ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇವರು ಮಾಡುತ್ತಿರುವ ಹಗರಣಗಳನ್ನು ಬಿಜೆಪಿ ಪಕ್ಷದ ನಾಯಕರೇ ಬಹಿರಂಗಪಡಿಸುತ್ತಿದ್ದಾರೆ ಅವರ ವಿರುದ್ಧವೂ ಎಫ್‍ಐಆರ್ ದಾಖಲು ಮಾಡಿಸುವರೇ ಎಂದು ಸಲೀಂ ಅಹಮದ್ ಪ್ರಶ್ನಿಸಿದ್ದಾರೆ. ಸತ್ಯವನ್ನು ಎದುರಿಸಲಾಗದೆ ಯಡಿಯೂರಪ್ಪ ಅವರ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಹೊರಟಿದೆ.

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಮಾಡಿದ ಆರೋಪಗಳಿಗೆ ಉತ್ತರ ನೀಡಲಾಗದೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿರುವುದು ಖಂಡನೀಯ. ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಸಲೀಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷ್ಮಣ್ ವಿರುದ್ಧ ವಕೀಲರಾದ ಜಿ.ದೇವೇಗೌಡ ಅವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ.

ಆಗಸ್ಟ್ 26ರಂದು ಲಕ್ಷಣ್ ಮತ್ತು ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಮಂಜುಳ ಮಾನಸ ಅವರು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿ.ವೈ.ರಾಘವೇಂದ್ರ ಅವರು ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಪ್ರಧಾನಮಂತ್ರಿ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಆರೋಪಗಳಿಂದ ರಾಘವೇಂದ್ರ ಅವರ ಗೌರವಕ್ಕೆ ಧಕ್ಕೆಯಾಗಿದೆ ಎಂದು ದೇವೇಗೌಡ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಬಿಜೆಪಿ ಶಾಸಕರು ಬಿ.ವೈ.ರಾಘವೇಂದ್ರ ಅವರ ವಿರುದ್ಧ ಅವರ ಪಕ್ಷದ ಹೈಕಮಾಂಡ್‍ಗೆ ಬರೆದಿದ್ದಾರೆ ಎಂದು ಹೇಳಲಾದ ಪತ್ರವನ್ನು ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಆದರೆ ಅದು ನಕಲಿಯಾಗಿದೆ. ಬಿಜೆಪಿ ಶಾಸಕರು ಸಹಿಗಳನ್ನು ನಕಲಿ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಲಕ್ಷ್ಮಣ್ ಅವರು ಇತ್ತೀಚೆಗೆ ಬಿಜೆಪಿ ವಿರುದ್ಧ ಕೆಂಡಾಮಂಡಲದಂತಹ ಆರೋಪಗಳನ್ನು ಮಾಡುತ್ತಿದ್ದು, ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾ. ಅವರ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲಿಸಿರುವುದು ಕಾಂಗ್ರೆಸ್ ಸಿಟ್ಟಿಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here