ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪುತ್ರ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ ಜೆ ಪಿ ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.
ಅಲ್ಲದೆ, ಅಗತ್ಯವಿದ್ದಲ್ಲಿ ಮುಂದಿನ ವಾರಗಳಲ್ಲಿ ತನ್ನ ತಂದೆಗೆ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಚಿರಾಗ್ ಹೇಳಿದ್ದಾರೆ. ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಚಿರಾಗ್ ಕಳೆದ ಹಲವು ದಿನಗಳಿಂದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸಂಜೆ ಕೆಲವು ಹಠಾತ್ ಬೆಳವಣಿಗೆಗಳಿಂದಾಗಿ, ತಡರಾತ್ರಿಯಲ್ಲಿ ಅವರ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಿಸಬೇಕಾಗುವುದು ಈ ಹೋರಾಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎ ನ ಸೀಟು ಹಂಚಿಕೆ ಸಂಬಂಧ ಸಭೆ ನಡೆಯಬೇಕಿದ್ದು, ಪಾಸ್ವಾನ್ ಅವರ ಅನಾರೋಗ್ಯದ ಕಾರಣ ಸಭೆ ಮುಂದೂಡಲ್ಪಟ್ಟಿದೆ.