ಕೋವಿಡ್ ಸೋಂಕಿಗೆ ತುತ್ತಾಗಿರುವ ಬಸವ ಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಈ ಹಿನ್ನಲೆಯಲ್ಲಿ ನಾರಾಯಣರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಾರಾಯಣರಾವ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಆಸ್ಪತ್ರೆ ನಿರ್ದೇಶಕ ಮನೀಶ್ ರೈ ತಿಳಿಸಿದ್ದಾರೆ.
ನಾರಾಯಣರಾವ್ ಅವರು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕೆಲ ವಾರಗಳ ಹಿಂದೆ ಸಬೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಜ್ವರದಿಂದ ಬಳಲುತ್ತಿದ್ದರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾರ್ಜುನ್ ಖುಬಾ ಮತ್ತು ಜೆಡಿಎಸ್ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದರು.