ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದರು.
ನಿನ್ನೆ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.
ಅಂತೆಯೇ ಇಂದು ಸಂಜೆ ನಿರ್ಮಲಾನಂದನಾಥ ಸ್ವಾಮೀಜಿಗಳು ಸದಾಶಿವನಗರದಲ್ಲಿರುವ ಡಿಕೆಎಸ್ ನಿವಾಸಕ್ಕೆ ಭೇಟಿ ನೀಡಿದರು. ಶ್ರೀಗಳ ಜೊತೆ ಮಾಜಿ ಸಚಿವ ಚಲುವರಾಯಸ್ವಾಮಿ ಇದ್ದರು.