ದೆಹಲಿಗೆ ರಮೇಶ್ ಜಾರಕಿಹೊಳಿ ಪಯಣ…! ರಾಜಕೀಯ ಪಡಸಾಲೆಯಲ್ಲಿ ಗುಸುಗುಸು ಶುರು…?

0

ಆಗಸ್ಟ್ ಮಧ್ಯಭಾಗದಲ್ಲಿ ಸಂಪುಟ ಪುನರ್ ರಚನೆಯ ಮಾತುಗಳು ಕೇಳಿಬರುತ್ತಿರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿನ್ನೆ ನವದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿದೆ.

ಉಪ ಮುಖ್ಯಮಂತ್ರಿ ಲಕ್ಷ್ಣಣ್ ಸವದಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ಜಾರಕಿಹೊಳಿ ಇದೀಗ ನವದೆಹಲಿಗೆ ತೆರಳುತ್ತಿರುವುದು ಸಾಕಷ್ಟು ಕುತೂಹಲ ಕೆರಳಸಿದೆ.

ಎರಡು ದಿನಗಳ ನವದೆಹಲಿ ಭೇಟಿ ವೇಳೆಯಲ್ಲಿ ಲಕ್ಷ್ಣಣ್ ಸವದಿಯನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವಂತೆ ಹಾಗೂ ಹೆಚ್ ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಲಾಬಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಜುಲೈ ಆರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದಾಗ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ನವದೆಹಲಿಯ ಭೇಟಿ ವೇಳೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಗಜೇಂದ್ರ ಸಿಂಗ್ ಶೇಖಾವತ್, ಸುರೇಶ್ ಅಂಗಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅರಣ್ಯ, ರೈಲ್ವೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಅಧಿಕಾರಿಗಳನ್ನು ಭೇಟಿಯಾಗಲು ಜಾರಕಿಹೊಳಿ ಯೋಜನೆ ಹಾಕಿಕೊಂಡಿದ್ದಾರೆ.

ಮಂಗಳವಾರ ಜೆಪಿ ನಡ್ಡಾ ಅವರನ್ನು ಜಾರಕಿಹೊಳಿ ಭೇಟಿಯಾಗಲಿದ್ದಾರೆ. ದೊಡ್ಡ ಹೊಣೆಗಾರಿಕೆಗಾಗಿ ಅವರನ್ನು ನವದೆಹಲಿಯ ಪಕ್ಷದ ಕೇಂದ್ರ ನಾಯಕತ್ವದಿಂದ ಕರೆಯಲಾಗಿದೆ ಎಂಬುದು ಸಚಿವರ ಆಪ್ತ ಮೂಲಗಳು ಹೇಳುತ್ತಿವೆ.

LEAVE A REPLY

Please enter your comment!
Please enter your name here