“ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ”ದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ಶ್ರೀ ಎಲ್. ಎಸ್. ತೇಜಸ್ವಿ ಸೂರ್ಯ ರವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಅಭಿನಂದಿಸಲಾಯಿತು.

0

ಮಾಧ್ಯಮದ ಆತ್ಮೀಯರೇ,

“ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ”ದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ಶ್ರೀ ಎಲ್. ಎಸ್. ತೇಜಸ್ವಿ ಸೂರ್ಯ ರವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಅಭಿನಂದಿಸಲಾಯಿತು.

ಯಡಿಯೂರು ಸಮುದಾಯ ಭವನದಲ್ಲಿ ಇಂದು ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ತೇಜಸ್ವಿ ಸೂರ್ಯ ರವರೊಂದಿಗೆ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ. ಅಶ್ವಥ್ ನಾರಾಯಣ್, ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಶಾಸಕ ಶ್ರೀ. ಸತೀಶ್ ರೆಡ್ಡಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ. ಡಾ|| ಸಂದೀಪ್, ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರಾಗಿರುವ ಶ್ರೀ. ಎ. ಹೆಚ್. ಬಸವರಾಜ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಮುಜಾಮಿಲ್ ಬಾಬು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಸೈಯದ್ ಸಲಾಂ ರವರು ಸೇರಿದಂತೆ ರಾಜ್ಯ ಘಟಕದ ಪದಾಧಿಕಾರಿಗಳಾಗಿ ನೇಮಕಗೊಂಡಿರುವ ಶ್ರೀ. ಲಲ್ಲೇಶ್ ರೆಡ್ಡಿ, ಶ್ರೀ. ಗೋವಿಂದ ನಾಯ್ಡು ಮತ್ತು ಶ್ರೀ. ಅನಿಲ್ ಶೆಟ್ಟಿ ರವರನ್ನೂ ಸಹ ಸನ್ಮಾನಿಸಲಾಯಿತು.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಶ್ರೀ. ರಮೇಶ್ ಎನ್. ಆರ್. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಅಭಿನಂದನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಭಾ.ಜ.ಪಾ. ಘಟಕದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

– ರಮೇಶ್ ಎನ್. ಆರ್.
ಅಧ್ಯಕ್ಷರು,
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ

LEAVE A REPLY

Please enter your comment!
Please enter your name here