ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 20 ವರ್ಷದ ದಲಿತ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮತ್ತು ರಾಜಕೀಯ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಈ ನಡುವೆ ವಿಧಿವಿಜ್ಞಾನ ವರದಿಪ್ರಕಾರ, ಮಹಿಳೆ ಅತ್ಯಾಚಾರಕ್ಕೆ ಈಡಾಗಿಲ್ಲ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಗುರುವಾರ ಹೇಳಿದ್ದಾರೆ.
‘ಕುತ್ತಿಗೆಯಲ್ಲಿ ಗಾಯಾಗಿದ್ದು, ಈ ಹಿನ್ನಲೆಯಲ್ಲಿ ಮೃತಪಟ್ಟಿರುವುದಾಗಿ ಮರಣೋತ್ತರ ವರದಿ ಹೇಳಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್ ) ವರದಿ, ಮಾದರಿಗಳಲ್ಲಿ ವೀರ್ಯಾಣು ಪತ್ತೆಯಾಗಿಲ್ಲ’ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ‘ಸಾಮಾಜಿಕ ಸಾಮರಸ್ಯಕ್ಕೆ ಭಂಗ ತರುವ ಹಾಗೂ ಜಾತಿ ಹಿಂಸೆ ಸೃಷ್ಟಿಸುವ ಸಲುವಾಗಿ ಕೆಲವರು ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಅಂತ ಹೇಳಿದ್ದಾರೆ.