ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ಮಹಾಮಾರಿಗೆ ನಿನ್ನೆ ಕೇಂದ್ರ ಸಚಿವ ಸುರೇಶ್ ಅಂಗಡಿ ಮೃತಪಟ್ಟಿದ್ದಾರೆ. ಈ ನಡುವೆ ಸುರೇಶ್ ಅಂಗಡಿ ಪಿಎ ಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಸುರೇಶ್ ಅಂಗಡಿ ಪಿಎ ಆಗಿರುವ ಪ್ರಕಾಶ್ ಅಂಗಡಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕತ್ಸೆ ನೀಡಲಾಗುತ್ತಿದೆ.
ಸುರೇಶ್ ಅಂಗಡಿ ಅವರು ಕೊರೊನಾ ವೈರಸ್ ನಿಂದ ಬುಧವಾರ ದೆಹಲಿಯಲ್ಲಿ ಮೃತಪಟ್ಟಿದ್ದು, ಇಂದು ದೆಹಲಿಯಲ್ಲೇ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.